ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಜಾತಿ ಧರ್ಮ ಒಡೆಯುವ ಕೆಲಸ: ಸಚಿವೆ ಶೋಭಾ ಕರಂದ್ಲಾಜೆ

ಕಾಲ್ತುಳಿತ ಪ್ರಕರಣವನ್ನು ಮರೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇತ್ತೀಚೆಗೆ ಸಿಎಂ ಹಾಗೂ ಡಿಸಿಎಂನ್ನು ದೆಹಲಿಗೆ ಕರೆಸಿಕೊಂಡಿದ್ದ ಹೈಕಮಾಂಡ್ ಜನರ ಮನಸ್ಸಿನಿಂದ ಕಾಲ್ತುಳಿತ ಪ್ರಕರಣವನ್ನು ಮರೆಸಲು ಹೊಸ ವಿಷಯವನ್ನು ಜನರ ಮುಂದಿಡಿ ಎಂದು ಸಲಹೆ ನೀಡಿದೆ. ಆದ್ದರಿಂದ ಈಗ ಜಾತಿ ಗಣತಿ ವಿಷಯ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಜಾತಿ ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.
Next Story