ಕಾಲ್ತುಳಿತ ದುರಂತ: ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ


ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರಿಗೂ ಕಾರ್ಯಕ್ರಮಕ್ಕೆ ಬರುವಂತೆ ನಾನೇ ಕರೆ ಮಾಡಿ ಆಹ್ವಾನ ನೀಡಿದ್ದೆ. ಆದಿನ ಮಳೆ ಬಂದು ಕಾರ್ಯಕ್ರಮ ಮುಕ್ತಯವಾಗಿತ್ತು. ನಾನು ಅಲ್ಲಿಂದ ಹೊರಟೆ ನಂತರ ಏನಾಯಿತು, ಎಷ್ಟು ಜನ ಮೃತಪಟ್ಟರು ಎಂದು ನನಗೆ ತಿಳಿಯಲಿಲ್ಲ ಎಂದರು. 

ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿದೆ ಎಂದು ಬಿಜೆಪಿ ಆರೋಪಿಸಿದ್ದರು. ನಾವು ಈ ಪ್ರಕರಣದಲ್ಲಿ ಕ್ರಮ ಕೈಗೊಂಡು ಐವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ. ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದರು.

 

Read More
Next Story