ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಯಾರೂ ರಾಜಕೀಯ ಮಾಡಬೇಡಿ- ಯು.ಟಿ.ಖಾದರ್‌ ಮನವಿ




ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ಮುಖಂಡರು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಮನವಿ ಮಾಡಿದ್ದಾರೆ.

ಸುಹಾಸ್ ಶೆಟ್ಟಿ ಎರಡು ಕೊಲೆ ಪ್ರಕರಣಗಳಲ್ಲಿ ಎ-1ಆರೋಪಿಯಾಗಿದ್ದ. ಈಗ ಆತನ ಕೊಲೆಯಾಗಿದ್ದು, ಈ ಬಗ್ಗೆ ತನಿಖೆ ನಡೆಯಲಿದೆ. ಆ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಸಂಬಂದ ಆ ಭಾಗದ ಜನರು ಸಂಯಮ ಕಳೆದುಕೊಳ್ಳಬಾರದು. ಕರಾವಳಿ ಭಾಗ ಸಾಕಷ್ಟು ಸಮೃದ್ದಿಯಾಗಿದೆ. ಇಂತಹ ಪ್ರದೇಶದಲ್ಲಿ ಈ ರೀತಿ ಘಟನೆ ಮನಸ್ಸಿಗೆ ನೋವಾಗುತ್ತದೆ ಎಂದಿದ್ದಾರೆ.

Read More
Next Story