ಇಂದಿನ ಶೋಧಕಾರ್ಯ ರದ್ದುಗೊಳಿಸಿದ ಎಸ್ಐಟಿ
ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಪ್ರಮುಖ ಮಾಹಿತಿದಾರ ಭೀಮ ಮತ್ತು ಇತರ ನಾಲ್ವರನ್ನು ವಿಚಾರಣೆ ನಡೆಸಿ ವಾಪಸ್ ಕಳಿಸಿದ್ದಾರೆ. ಇಂದು ನಡೆಯಬೇಕಿದ್ದ 13ನೇ ಸ್ಥಳದ ಶೋಧಕಾರ್ಯ ರದ್ದುಗೊಳಿಸಲಾಗಿದೆ.
ಅಧಿಕಾರಿಗಳು 13ನೇ ಸ್ಥಳದಲ್ಲಿ ಶೋಧಕಾರ್ಯ ಮಾಡುವ ಮೊದಲು ರಾಡರ್ ಉಪಯೋಗ ಮಾಡುವ ಬಗ್ಗೆ ನಿರ್ಧಾರ ಮಾಡಿದ್ದು, ಇದಕ್ಕೆ ಇನ್ನಷ್ಟು ದಿನದ ಅವಶ್ಯಕತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Next Story