ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮ ಗೊಂದಲದ ಗೂಡಾಗಿತ್ತು: ಸಚಿವ ಎಚ್ಡಿಕೆ
ವಿಧಾನಸೌಧ ಮುಂದೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಮಾಡಿದ ರೀತಿ ನೋಡಿದರೆ ಗೊತ್ತಾಗುತ್ತದೆ ಎಷ್ಟು ಗೊಂದಲ ಇದೆ ಎಂದು. ವೇದಿಕೆಯಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಸೇರಿಕೊಂಡು ಕೂಲಿಂಗ್ ಗ್ಲಾಸ್ ಹಾಕಿಕೊಂಡಿದ್ದರು. ಬುಧವಾರ ಮಧ್ಯಾಹ್ನ 3.10 ಕ್ಕೆ ಕಾಲ್ತುಳಿತಕ್ಕೆ ಒಬ್ಬರು ಮೃತಪಟ್ಟಿರುವುದು ಸರ್ಕಾರದ ಗಮನಕ್ಕೆ ಬಂದರೂ ಸರ್ಕಾರ ಸಂಭ್ರಮಾಚರಣೆ ಮಾಡುತ್ತಿದ್ದರು. ನಂತರ ಕ್ರೀಡಾಂಗಣಕ್ಕೆ ಡಿಕೆಶಿ ಹೋಗಿ ಟ್ರೋಪಿಗೆ ಮುತ್ತಿಡುತ್ತಿದ್ದರು. ಈವೆಂಟ್ ಮ್ಯಾನೇಜ್ ಮೆಂಟ್ನವರು ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡೂ ಕಡೆ ಕಾರ್ಯಕ್ರಮಕ್ಕೆ ಅವಕಾಶಕೋರಿದ್ದರು. ಅನುಮತಿ ನೀಡಿದ್ದು ಯಾರು ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
Next Story