ಸಿಎಂ ಕುರ್ಚಿ ಉಳಿವಿಗಾಗಿ ಜಾತಿಗಣತಿ ವರದಿ ಮಂಡನೆ


ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅನಿಸುತ್ತಿಲ್ಲ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ವರದಿ ಮಂಡನೆಯ ದಾಳ ಉರುಳಿಸುತ್ತಿದ್ದಾರೆ ಎಂದು ಕೇಂದ್ರದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿವಾರು ಜನಗಣತಿಗೆ ಕಾಂಗ್ರೆಸ್‌ ಪಕ್ಷದ ನಾಯಕರಲ್ಲೇ ಒಗ್ಗಟ್ಟಿಲ್ಲ. 10 ವರ್ಷಗಳ ಹಳೆಯ ವರದಿಯನ್ನು ಜಾರಿ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ. 

Read More
Next Story