ದೆಹಲಿ ಪೊಲೀಸರಿಂದ ತನಿಖೆ ಆರಂಭ

ಕಾಲ್ತುಳಿತದ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ಏನಾಯಿತು ಎಂಬುದನ್ನು ಕಂಡುಹಿಡಿಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.

"ಕಾಲ್ತುಳಿತಕ್ಕೆ ಕಾರಣ ಕಂಡು ಹಿಡಿಯುವುದು ನಮ್ಮ ಮುಖ್ಯ ಗುರಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಆ ಸಮಯದಲ್ಲಿ ಅಧಿಕಾರಿಗಳು ಮಾಡಿರುವ ಪ್ರಕಟಣೆಗಳ ಎಲ್ಲಾ ಮಾಹಿತಿಯನ್ನು ನಾವು ಸಂಗ್ರಹಿಸುತ್ತೇವೆ" ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ಲಾಟ್​​ ಫಾರ್ಮ್​​ ಬದಲಾವಣೆಯ ಬಗ್ಗೆ ತಪ್ಪು ಪ್ರಕಟಣೆ ಗೊಂದಲಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.

ಕಾಲ್ತುಳಿತಕ್ಕೂ ಮುನ್ನ ನಿಲ್ದಾಣದ ಪ್ಲಾಟ್​​ಫಾರ್ಮ್​ ಸಂಖ್ಯೆ 14 ಮತ್ತು 15 ರಲ್ಲಿ ಪ್ರಯಾಗ್​ರಾಜ್​ಗೆ ಹೋಗುವ ರೈಲುಗಳನ್ನು ಹತ್ತಲು ದೊಡ್ಡ ಸಂಖ್ಯೆಯ ಪ್ರಯಾಣಿಕರು ಕಾಯುತ್ತಿದ್ದರು. ರೈಲು ವಿಳಂಬವೇ ಕಾಲ್ತುಳಿತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Read More
Next Story