ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, "ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರ. ನಿಲ್ದಾಣದಿಂದ ಬರುವ ವೀಡಿಯೊಗಳು ಅತ್ಯಂತ ಹೃದಯ ವಿದ್ರಾವಕವಾಗಿವೆ ಎಂದು ಹೇಳಿದ್ದಾರೆ.
"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ ಸತ್ಯ ಮರೆಮಾಚುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನವು ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಖಂಡನೀಯ, ಎಂದು ಹೇಳಿದ್ದಾರೆ.
"ಸತ್ತ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಗುರುತನ್ನು ಸಹ ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಬರೆದಿದ್ದಾರೆ.
Next Story