ಕಾಡುಗೋಡಿಯಲ್ಲಿ ಅರಣ್ಯ ಭೂಮಿ ತೆರವು; ನಿಲುವಳಿ ಸೂಚನೆ ಮಂಡನೆ


ಬೆಂಗಳೂರಿನ ಕಾಡುಗೋಡಿ ಪ್ಲಾಂಟೇಷನ್‌ ಪ್ರದೇಶದಲ್ಲಿ ದಶಕಗಳಿಂದ ವಾಸ ಮಾಡುತ್ತಿದ್ದ ದಿನ್ನೂರು ಗ್ರಾಮದ ಹಿಂದುಳಿದ ಮತ್ತು ದಲಿತ ಕುಟುಂಬಗಳನ್ನು ಸರ್ಕಾರ ಏಕಾಏಕಿ ಎತ್ತಂಗಡಿ ಮಾಡಿ, "ಅರಣ್ಯ ಭೂಮಿ” ಎಂದು ಘೋಷಿಸಿದೆ. ರೈತರ ಅನುಮತಿ, ಪರಿಶೀಲನೆ ಹಾಗೂ ದಾಖಲಾತಿಗಳ ಪರಿಶೀಲನೆ ಮಾಡದೇ ನಿರ್ಧಾರ ಕೈಗೊಂಡಿರುವುದು ಕಾನೂನು ಬಾಹಿರ. ಇದು ಸಂವಿಧಾನದಲ್ಲಿ ಭದ್ರಪಡಿಸಿದ ಸಾಮಾಜಿಕ ಹಾಗೂ ಆರ್ಥಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನ ಮೇಲೆ ಸರ್ಕಾರ ತೆಗೆದುಕೊಂಡ ಕ್ರಮಗಳೇನು ಎಂಬುದರ ಕುರಿತು ಚರ್ಚಿಸಕು ಅವಕಾಶ ನೀಡುವಂತೆ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ್ದಾರೆ. 

Read More
Next Story