ಮೃತಪಟ್ಟ ಗಣ್ಯರಿಗೆ ವಿಧಾನಸಭಾ ಕಲಾಪದಲ್ಲಿ ಸಂತಾಪ ಸಲ್ಲಿಕೆ


ಇಂದಿನಿಂದ ಆರಂಭವಾಗಿರುವ ವಿಧಾನಸಭಾ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಕೆಯಾಗಲಿದೆ. ಗುಜರಾತ್‌ನಲ್ಲಿ ಸಂಭವಿಸಿದ ವಿಮಾನ ದುರಂತ ಮತ್ತು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ‌ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಾಗುವುದು. 

ಮಾಜಿ ಸಚಿವ ಬೇಗಾನೆ ರಾಮಯ್ಯ, ಮಾಜಿ ಶಾಸಕ ಕಾಕಸೋ ಪಾಂಡುರಂಗ ಪಾಟೀಲ್, ಎನ್ ರಾಜಣ್ಣ, ಡೆರ್ರಿಕ್ ಎಂ. ಬಿ, ಹಂಗಾಮಿ ಸಭಾಪತಿ ಎನ್ ತಿಪ್ಪಣ್ಣ, ಮಾಜಿ ಉಪಸಭಾಪತಿ ಡೇವಿಡ್ ಸಿಮೆಯೋನ್, ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್, ಕೃಷಿ ವಿಜ್ಞಾನಿ ಪ್ರೊ. ಸುಬ್ಬಣ್ಣ ಅಯ್ಯಪ್ಪನ್, ಅಣು ವಿಜ್ಞಾನಿ ಎಂ. ಆರ್. ಶ್ರೀನಿವಾಸನ್, ಸಾಹಿತಿ ಪ್ರೊ. ಜಿ. ಎಸ್. ಸಿದ್ದಲಿಂಗಯ್ಯ, ಹಿರಿಯ ಕವಿ ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ, ಚಿತ್ರನಟಿ ಬಿ. ಸರೋಜಾದೇವಿ, ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರಿಗೆ ಸಂತಾಪ ಸಲ್ಲಿಕೆಯಾಗಲಿದೆ.

Read More
Next Story