ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ: ಛಲವಾದಿ ನಾರಾಯಣಸ್ವಾಮಿ


ರಾಜ್ಯ ಸರ್ಕಾರ ಆರ್‌ಸಿಬಿ ಗೆಲುವಿನ ಲಾಭ ಪಡೆಯಲು ಮುಂದಾಗಿತ್ತು. ಕಪ್‌ ಆರ್‌ಸಿಬಿದು, ತಪ್ಪು ಸರ್ಕಾರದ್ದು ಎಂದು ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಕಾಲ್ತುಳಿತದಲ್ಲಿ ಬಲಿಯಾದ 11 ಅಭಿಮಾನಿಗಳ ಸಾವಿಗೆ ರಾಜ್ಯ ಸರ್ಕಾರವೇ ಕಾರಣ. ಆರಂಭದಲ್ಲಿ ಪೊಲೀಸರ ತಪ್ಪಿಲ್ಲ ಎಂದಿದ್ದರು. ಬಳಿಕ ಪೊಲೀಸರದ್ದೇ ತಪ್ಪು ಎಂದು ಹೇಳಿದರು. ರಾಜ್ಯದಲ್ಲಿ ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

 

Read More
Next Story