ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೇರ್ಗಳ್ಳಿ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಹತ್ತು ನಿಮಿಷ ತಡವಾಗಿ ಆರಂಭವಾಗಿದೆ ಎಂದು ಮತದಾರರು ಆಕ್ಷೇಪ ವ್ಯಕ್ತಪಡಿಸಿದರು.  ಇಲ್ಲಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಸಾರ್ವಜನಿಕರ ಜೊತೆ ಸರದಿ ಸಾಲಿನಲ್ಲಿ ಬಂದು ಮತ ದಾನ ಮಾಡಿದರು. ವಾರ್ಡ್ ನಂ. 51ರ ಬೂತ್‌ ನಂ. 139ರಲ್ಲಿ (ಸಂಸ್ಕೃತ ಪಾಠಶಾಲೆಯಲ್ಲಿ) ಮತದಾನ ಮಾಡಿದರು. ಅವರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದರು.

Read More
Next Story