ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಮತದಾನವಿರೋಧ ಪಕ್ಷದ ನಾಯಕ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಮತದಾನ

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಜಾಲಹಳ್ಳಿಯ ಮತಗಟ್ಟೆಯಲ್ಲಿ ತಮ್ಮ ಕುಟುಂಬ ಸಮೇತವಾಗಿ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ಅವರು, ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬೇಡಿ. ಮತ ಚಲಾಯಿಸುವ ಮುಖಾಂತರ ಈ ದೇಶದ ಭವಿಷ್ಯವನ್ನು ಮತ್ತು ಅಭಿವೃದ್ಧಿಯನ್ನು ತೀರ್ಮಾನ ಮಾಡುವ ಚುನಾವಣೆ ಇದು. ಇಂತಹ ಅಪರೂಪದ ಚುನಾವಣೆಯಲ್ಲಿ ತಾವೆಲ್ಲರು ಭಾಗಿಯಾಗಬೇಕು. ಮತದಾನ ಕೇಂದ್ರಕ್ಕೆ ಬರಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಆದಷ್ಟು ಬೇಗ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿ ಎಂದು ಹೇಳಿದರು.

Read More
Next Story