ಕುಟುಂಬಸ್ಥರೊಂದಿಗೆ ಬಂದು ಯದುವೀರ್ ಮತದಾನಮೈಸೂರು- ಕೊಡಗು... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಕುಟುಂಬಸ್ಥರೊಂದಿಗೆ ಬಂದು ಯದುವೀರ್ ಮತದಾನ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಂಕರಮಠ ರಸ್ತೆಯ ಶ್ರೀಕಾಂತ ಮಹಿಳಾ ವಿದ್ಯಾಲಯದಲ್ಲಿ ಶುಕ್ರವಾರ ಮತ ದಾನ ಮಾಡಿದರು. ತಾಯಿ ಪ್ರಮೋದಾದೇವಿ ಒಡೆಯರ್, ಪತ್ನಿ ತ್ರಿಷಿಕಾದೇವಿ ಜೊತೆ ಬಂದು ಮತ ಚಲಾಯಿಸಿದರು. ಇದಕ್ಕೂ ಮುನ್ನ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

Read More
Next Story