ಕಾಂಗ್ರೆಸ್ ಪ್ರಚಾರ ಕರಪತ್ರ ಹಿಡಿದು ಟೀಕೆ ಮಾಡಿದ ಮಾಜಿ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಕಾಂಗ್ರೆಸ್ ಪ್ರಚಾರ ಕರಪತ್ರ ಹಿಡಿದು ಟೀಕೆ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆಗೆ ಆಗಮಿಸಿ ಮತದಾನ ಮಾಡಿದರು.

ಮತದಾನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ʻʻಮಹಾನುಭಾವ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಸ್ಪರ್ಧಿಸಲು ಯೋಗ್ಯತೆ ಇಲ್ಲದೇ ಚುನಾವಣೆಗೆ ಕೇರಳದಲ್ಲಿ ಹೋಗಿ ನಿಂತಿದ್ದಾರೆ. ಇವರು ಕೊಡುವ ಚುನಾವಣಾ ಪ್ರಚಾರದ ಕಾರ್ಡ್‌ನಲ್ಲಿ ನೀಡಿರುವ ಭರವಸೆಗಳಿಗೆ ಸಿಎಂ, ಹಾಗೂ ಉಪಮುಖ್ಯಮಂತ್ರಿ ಅವರು ಸಹಿ ಮಾಡಿದರೆ ನಾನು ಒಪ್ಪುತ್ತೇನೆ. ಜನರಿಗೆ ವಂಚನೆ ಮಾಡುವ, ಮೋಸ ಮಾಡುವ ಒಂದು ದುಷ್ಕೃತ್ಯ ಈ ರಾಜ್ಯದಲ್ಲಿ ನಡೆದಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಜನರನ್ನು ತಪ್ಪುದಾರಿಗೆ ಎಳೆಯಲು ಮತ್ತು ಮೂರ್ಖರನ್ನಾಗಿಸಲು ಕರ್ನಾಟಕದಲ್ಲಿ ಕರಪತ್ರ ಹಂಚಲಾಗಿದೆ' ಎಂದು ಕಾಂಗ್ರೆಸ್ ಗ್ಯಾರಂಟಿ ಕರಪತ್ರದ ಬಗ್ಗೆ ವ್ಯಂಗ್ಯವಾಡಿದರು.

Read More
Next Story