ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಸಂಪೂರ್ಣ ಬೆಂಬಲವಾಗಿರುತ್ತೇವೆ: ಪಿಣರಾಯಿ ವಿಜಯನ್‌ಗೆ ಸ್ಟ್ಯಾಲಿನ್ ಭರವಸೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ರಾಜ್ಯದ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ.

ಪರಿಹಾರ ಚಟುವಟಿಕೆಗಳಿಗೆ 5 ಕೋಟಿ ರೂ.ಬಿಡುಗಡೆ ಮಾಡುವಂತೆ ತಮಿಳುನಾಡು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯದಲ್ಲಿ ನೆರವಾಗಲು ರಕ್ಷಣಾ ತಂಡವನ್ನು ಕೇರಳಕ್ಕೆ ಕಳುಹಿಸಲು ಅಧಿಕಾರಿಗಳಿಗೆ ಸ್ಟ್ಯಾಲಿನ್ ಸೂಚಿಸಿದರು.

ತಮಿಳುನಾಡು ತಂಡವು ರಾಜ್ಯ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ 20 ಸಿಬ್ಬಂದಿ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ 20 ಮತ್ತು 10 ವೈದ್ಯರು ಮತ್ತು ದಾದಿಯರನ್ನು ಒಳಗೊಂಡಿರುತ್ತದೆ. ಅವರು ಕೇರಳ ರಕ್ಷಣಾ ತಂಡಗಳೊಂದಿಗೆ ಕೆಲಸ ಮಾಡಲಿದ್ದು, ತಕ್ಷಣ ನೆರೆಯ ರಾಜ್ಯಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More
Next Story