
ರಾಜಣ್ಣ ವಜಾ: ಸಿಎಂ, ಡಿಸಿಎಂಗೆ ಗೊತ್ತಿರಬಹುದು- ಪರಮೇಶ್ವರ್
ರಾಜಣ್ಣ ಅವರನ್ನು ಸಂಪುಟದಿಂದ ಯಾಕೆ ವಜಾ ಮಾಡಲಾಗಿದೆ ಎಂಬುದು ತಿಳಿದಿಲ್ಲ. ಸಿಎಂ ಹಾಗೂ ಡಿಸಿಎಂ ಅವರಿಗೆ ಗೊತ್ತಿರಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜಣ್ಣ ಅವರು ನನ್ನನ್ನು ಭೇಟಿ ಮಾಡಿ, ನಿಮಗೆ ಹೈಕಮಾಂಡ್ ಪರಿಚಯವಿದೆ, ಸಂಪುಟದಿಂದ ತೆಗೆದಿದ್ದು ಯಾಕೆ ಎಂದು ಕೇಳಿ ಎಂದರು. ಕೇಳುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಹೇಳಿದೆ. ಇದಕ್ಕೆ ಸಿಎಂ ಹಾಗೂ ಡಿಸಿಎಂ ಉತ್ತರಿಸಬೇಕು ಎಂದರು.
Next Story