ಅನ್‌ಲೈನ್‌ ಗೇಮಿಂಗ್‌ ನಿಯಂತ್ರಿಸಲು ಪ್ರತಿಪಕ್ಷಗಳ ಆಗ್ರಹ, ಚರ್ಚೆಗೆ ಒಪ್ಪಿಗೆ


ಜಾಹೀರಾತು ಮೂಲಕ ರಮ್ಮಿ ಸರ್ಕಲ್ ಆಡಿ ಎಂದು ಕೆಲವರು ಪ್ರಚೋದನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್‌ಗೆ ಕಡಿವಾಣ ಹಾಕಬೇಕು ಎಂದು ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ಆನ್‌ಲೈನ್ ಗೇಮಿಂಗ್‌ಗೆ ಕಡಿವಾಣ ಹಾಕದಿದ್ದರೆ ಯುವ ಸಮೂಹ ಹಾಳಾಗುತ್ತದೆ ಎಂದು ಪ್ರಶ್ನೋತ್ತರ ಕಲಾಪದಲ್ಲಿ ಗೃಹ ಸಚಿವರ ಗಮನ ಸೆಳೆದರು.

ಈ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಸರ್ಕಾರ ಆನ್‌ಲೈನ್ ಗೇಮಿಂಗ್ ನಿರ್ಬಂಧಿಸಿ ತಿದ್ದುಪಡಿ ಕಾಯ್ದೆ ತಂದಿತ್ತು. ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಕಾಯ್ದೆಯನ್ನು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್‌ ಮೊಹಂತಿ ನೇತೃತ್ವದಲ್ಲೂ ಸಮಿತಿ‌ ಮಾಡಿದ್ದೇವೆ. ವರದಿ ಬಂದ ನಂತರ ಸುಪ್ರೀಂಕೋರ್ಟ್ ನಡೆ ನೋಡಿಕೊಂಡು ನಿರ್ಧಾರ ಕೈಗೊಳ್ಳತ್ತೇವೆ ಎಂದರು.

ಆನ್ಲೈನ್ ಗೇಮಿಂಗ್ ಬಗ್ಗೆ ಪಕ್ಷಾತೀತವಾಗಿ ಶಾಸಕರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಅರ್ಧಗಂಟೆಗೆಯ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದರು.

 

Read More
Next Story