'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸಿದ ಪ್ರಧಾನಿ


ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಆರಂಭಿಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ ಇಡೀ ವಾರ್ ರೂಮ್ ನಲ್ಲಿ ಕುಳಿತು ವೀಕ್ಷಿಸಿದರು.

ಭಾರತವು ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ರಾತ್ರಿ ದಾಳಿ ನಡೆಸಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥರು, ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಂತರವಾಗಿ ಪ್ರಧಾನಿಗೆ ಮಾಹಿತಿ ನೀಡಿದರು. ಪಹಲ್ಗಾಮ್ ದಾಳಿಯ ನಂತರ ಪ್ರಧಾನಿ ಮೋದಿ ಅವರು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಹಲವಾರು ಸುತ್ತಿನ ಮಾತುಕತೆಗಳನ್ನು ಕೂಡ ನಡೆಸಿರುವುದು ಕುತೂಹಲ ಮೂಡಿಸಿದೆ.

Read More
Next Story