ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶಗಳ ಬಳಿ ವಾಸಿಸುವ ನಾಗರಿಕರು ಬಂಕರ್​​ಗಳಿಗೆ ಸ್ಥಳಾಂತರ

ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ತೀವ್ರ ಶೆಲ್ ದಾಳಿ ಮತ್ತು ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಯ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರನ್ನು ತಕ್ಷಣ ಬಂಕರ್​ಗಳು ಮತ್ತು ಇತರ ಸುರಕ್ಷಿತ ಸ್ಥಳಗಳಿಗೆ ಹೋಗಲು ಆದೇಶಿಸಿದ್ದಾರೆ.

ಅಮಿತ್ ಶಾ ಅವರು ಬಿಎಸ್ಎಫ್ ಮಹಾನಿರ್ದೇಶಕ ಮತ್ತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭದ್ರತಾ ಪರಿಸ್ಥಿತಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿಗಳನ್ನು ಪರಿಶೀಲಿಸಿದರು ಮತ್ತು ಪರಿಹಾರ ಪ್ರಯತ್ನಗಳನ್ನು ಸಮನ್ವಯ ಮಾಡಿದ್ದಾರೆ. 

Read More
Next Story