ಭಾರತದ ಉದ್ವಿಗ್ನತೆಯನ್ನು ಶಮನಗೊಳಿಸಲು ಪಾಕ್ ಸಿದ್ಧವಾಗಿದೆ: ರಕ್ಷಣಾ ಸಚಿವ ಆಸಿಫ್


ಭಾರತ ಪರಿಸ್ಥಿತಿಯನ್ನು ಶಾಂತಗೊಳಿಸಿದರೆ, ಭಾರತದೊಂದಿಗಿನ ಉದ್ವಿಗ್ನತೆಯನ್ನು "ಮುಗಿದುಕೊಳ್ಳಲು" ಪಾಕಿಸ್ತಾನ ಸಿದ್ಧವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬುಧವಾರ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಗುರಿಗಳ ಮೇಲೆ ಭಾರತ ಮಿಲಿಟರಿ ದಾಳಿ ನಡೆಸಿದ ಕೆಲವೇ ಗಂಟೆಗಳ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. 

ಪಾಕಿಸ್ತಾನ ದಾಳಿ ಮಾಡಿದರೆ ಮಾತ್ರ ಪ್ರತಿಕ್ರಿಯಿಸುತ್ತದೆ ಎಂದು ಆಸಿಫ್ ಹೇಳಿರುವುದಾಗಿ ಬ್ಲೂಮ್‌ಬರ್ಗ್ ಟೆಲಿವಿಷನ್ ವರದಿ ಮಾಡಿದೆ.

"ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿಕ್ರಿಯಿಸುತ್ತೇವೆ. ಭಾರತ ಹಿಂದೆ ಸರಿದರೆ, ನಾವು ಖಂಡಿತವಾಗಿಯೂ ಈ ಉದ್ವಿಗ್ನತೆಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಮಾತುಕತೆಗಳ ಸಾಧ್ಯತೆಯ ಬಗ್ಗೆ, ಅಂತಹ ಯಾವುದೇ ಸಂಭಾವ್ಯ ಮಾತುಕತೆಗಳ ಬಗ್ಗೆ ತನಗೆ ತಿಳಿದಿಲ್ಲ ಅವರು ತಿಳಿಸಿದ್ದಾರೆ. 

Read More
Next Story