
ಕನ್ನಡಿಗರ ಜತೆ ಮಾತನಾಡಿ ಸಮನ್ವಯ ಚರ್ಚೆ ಮಾಡಿದ ತೇಜಸ್ವಿ ಸೂರ್ಯ
ಇಂದು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗ ಮೂಲದ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ತಾವು ಮಾತನಾಡಿರುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.
"ಗಾಯಗೊಂಡಿರುವ ಇತರ ಕುಟುಂಬ ಸದಸ್ಯರೊಂದಿಗೂ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಅವರಿಗೆ ಸಹಾಯ ಮಾಡುತ್ತಿದೆ ಹಾಗೂ ಅವರ ವಾಸ್ತವ್ಯ ಮತ್ತು ಸುರಕ್ಷತೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ," ಎಂದವರು ಹೇಳಿದ್ದಾರೆ.
"ನಾನು ಕರ್ನಾಟಕದ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ಸುರಕ್ಷಿತವಾಗಿ ಮನೆಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಮನ್ವಯ ಸಾಧಿಸುತ್ತೇವೆ," ಎಂದೂ ಭರವಸೆ ನೀಡಿದ್ದಾರೆ.
Next Story