ಪಹಲ್ಗಾಮ್‌ ದಾಳಿ: ಭಾರತದ ಕ್ರಮದ ಬೆನ್ನಲ್ಲೇ ತುರ್ತು ಉನ್ನತ ಮಟ್ಟದ ಸಭೆ ಕರೆದ ಪಾಕಿಸ್ತಾನ




ಭಾರತದ ರಾಜತಾಂತ್ರಿಕ ಸರ್ಜಿಕಲ್‌ ಸ್ಟ್ರೈಕ್‌ನಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ಇಂದು ತುರ್ತು ಉನ್ನತ ಮಟ್ಟದ ಸಭೆ ಕರೆದಿದೆ. ಪಾಕ್‌ ಪ್ರಧಾನಿ ಶಹಬಾಜ್‌ ಷರೀಫ್‌ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಯಲಿದೆ.

ಭಾರತದ ದಿಢೀರ್‌ ಕ್ರಮಗಳಿಂದ ಆಗುವ ಪರಿಣಾಮಗಳು, ಪಹಲ್ಗಾಮ್‌ ದಾಳಿಯಲ್ಲಿ ತನ್ನ ಪಾತ್ರವಿಲ್ಲ ಎಂಬುದನ್ನು ವಿಶ್ವ ಸಮುದಾಯಕ್ಕೆ  ಮನವರಿಕೆ ಮಾಡಿಕೊಡಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

Read More
Next Story