
ಸರ್ವಪಕ್ಷ ಸಭೆಗೆ ಮೋದಿ ಗೈರು; ರಾಜನಾಥ್ ಸಿಂಗ್ ನೇತೃತ್ವ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕೇಂದ್ರ ಸರ್ಕಾರ ಗುರುವಾರ (ಏಪ್ರಿಲ್ 24) ಸಂಜೆ ಸರ್ವಪಕ್ಷ ಸಭೆ ಕರೆದಿದ್ದು, ಅಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ದಾಳಿಯ ಕುರಿತು ಮಾಹಿತಿ ನೀಡಲಿದೆ ಮತ್ತು ಅವರ ಅಭಿಪ್ರಾಯಗಳನ್ನು ಕೇಳಲಿದೆ.
ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ನಿರ್ಲಕ್ಷಿಸಿ, ಚುನಾವಣೆ ಸನ್ನಿಹಿತವಾಗಿರುವ ಬಿಹಾರದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ವಿರೋಧ ಪಕ್ಷಗಳ ಸಿಟ್ಟಿಗೆ ಕಾರಣವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಅವರು ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ.
Next Story