ಭಾರತದ ಮೇಲೆ ಪ್ರತಿಕಾರದ ಕ್ರಮ ಘೋಷಿಸಿದ ಪಾಕಿಸ್ತಾನ; ತೀವ್ರಗೊಂಡ ಬಿಕ್ಕಟ್ಟು

ಸಿಂಧೂ ನದಿ ಜಲ ಒಪ್ಪಂದ ಸ್ಥಗಿತಗೊಳಿಸುವ ಭಾರತದ ಕ್ರಮಕ್ಕೆ ಪಾಕಿಸ್ತಾನ ತಿರುಗೇಟು ನೀಡಿದೆ. ಸಿಂಧೂ ನದಿಯ ನೀರನ್ನು ಬೇರೆಡೆ ತಿರುಗಿಸುವ ಯಾವುದೇ ಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ವ್ಯಾಪಾರ ಒಪ್ಪಂದ, ಸಿಮ್ಲಾ ಒಪ್ಪಂದ ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳ ಜೊತೆ ವಾಯುಪ್ರದೇಶ ಬಳಕೆಯನ್ನು ನಾವು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ರವಾನಿಸಿದೆ.
ಪಹಲ್ಗಾಮ್ ದಾಳಿಯ ನಂತರ ಭಾರತ ಸರ್ಕಾರ ಘೋಷಿಸಿದ ರಾಜತಾಂತ್ರಿಕ ನಿರ್ಧಾರಗಳ ಹಿನ್ನೆಲೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ ಪಾಕಿಸ್ತಾನ ಪ್ರತೀಕಾರದ ಕ್ರಮಗಳನ್ನು ಘೋಷಿಸಿದೆ.
Next Story