ಸಂತ್ರಸ್ತೆಯರಿಗೆ ಬೆದರಿಸುವ ಯತ್ನ: ರೇವಣ್ಣ ಎಸ್‌ಐಟಿ ವಶಕ್ಕೆ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ರೇವಣ್ಣ ಹಾಗೂ ಇತರರು ಅಪಹರಣ ಮಾಡಿದ್ದರು. ಈ ಮೂಲಕ ಸಂತ್ರಸ್ತೆಯನ್ನು ಬೆದರಿಸಲು ಯತ್ನಿಸಿದ್ದರು. ಇದೇ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ರೇವಣ್ಣ ಅವರನ್ನು ಕಚೇರಿಗೆ ಕರೆದೊಯ್ದು, ಬಂಧನದ ಕಾನೂನು ಪ್ರಕ್ರಿಯೆ ನಡೆಸಲಾಗುವುದು' ಎಂದು ಎಸ್‌ಐಟಿ ಮೂಲಗಳು ಹೇಳಿವೆ. 'ಆರೋಪಿಯನ್ನು ಕಚೇರಿಯಿಂದ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಬೇಕು. ಇದಾದ ನಂತರ, ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ' ಎಂದು ಹೇಳಲಾಗುತ್ತಿದೆ.

Read More
Next Story