ಆರ್‌ಸಿಬಿ ವಿಜಯೋತ್ಸವ: ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ


ಆರ್‌ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಈ ವೇಳೆ ನಡೆದ ನೂಕುನುಗ್ಗಲಿನಲ್ಲಿ 10 ಮಂದಿ ಮೃತಪಟ್ಟಿದ್ದು 25 ಕ್ಕೂ ಹೆಚ್ಚು ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ಘಟನೆಗೆ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್‌ʼ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಬೆಂಗಳೂರಿನಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯವಿದ್ರಾವಕವಾಗಿದ್ದು ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Read More
Next Story