ಆರ್‌ಸಿಬಿ, ಕೆಎಸ್‌ಸಿಎ ವಿರುದ್ದ ಕಬ್ಬನ್‌ಪಾರ್ಕ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು


ರಾಜ್ಯ ಸರ್ಕಾರ, ಕೆಎಸ್‌ಸಿಎ ಹಾಗೂ ಆರ್‌ಸಿಬಿ ಆಡಳಿತ ಮಂಡಳಿ ಸರಿಯಾದ ಯೋಜನೆ ರೂಪಿಸದೆ ಬುಧವಾರ(ಜೂ.4)ದಂದು ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದರು. ಹೈಕೋರ್ಟ್ ಸಹ ಸರ್ಕಾರಕ್ಕೆ ಚಾಟಿ ಬೀಸಿದ ಬೆನ್ನಲ್ಲೇ ಕೊನೆಗೂ ಎಚ್ಚೆತ್ತ ಪೊಲೀಸ್ ಇಲಾಖೆ ಕಾಲ್ತುಳಿತ ಪ್ರಕರಣವನ್ನು ಯುಡಿಆರ್ ಬದಲು ಎಫ್ಐಆರ್ ಆಗಿ ದಾಖಲಿಸಿದೆ. ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ಆಡಳಿತ ಮಂಡಳಿ ವಿರುದ್ಧ ಬಿಎನ್ಎಸ್ 195 ಅಜಾಗರೂಕತರೆ ಅಡಿ ಕಬ್ಬನ್‌ಪಾರ್ಕ್‌ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Read More
Next Story