ವಿಜಯ್ ಶಾ ಅವರೊಬ್ಬ ಮೂರ್ಖ; ಮುಕ್ತಾರ್ ಅಬ್ಬಾಸ್ ನಖ್ವಿ


ಆಪರೇಷನ್ ಸಿಂಧೂರ್ ಸಮಯದಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹಿರಿಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಬಿಜೆಪಿಯ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಖಂಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,, "ಅವರು ಮೂರ್ಖರು. ಕೆಲವು ಜನರು ಉತ್ಸಾಹದಲ್ಲಿ ಪ್ರಜ್ಞೆ ಕಳೆದುಕೊಳ್ಳುವ ಅಭ್ಯಾಸವನ್ನು ಹೊಂದಿರುತ್ತಾರೆ. ಅವರು ಹೇಳಿಕೆಗಳು ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದು ಬಣ್ಣಿಸಿದ ನಖ್ವಿ, ಕರ್ನಲ್ ಖುರೇಷಿ ಅವರ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಶಾ ಒಬ್ಬ ಜೋಕರ್ ಆಗಿದ್ದಾರೆ ಎಂದು ತಿಳಿಸಿದರು. 

Read More
Next Story