ಚುನಾವಣಾ ಆಯೋಗಕ್ಕೆ ಕಾಲ್ನಡಿಗೆಯಲ್ಲೇ ತೆರಳಿ ದೂರು


ಫ್ರೀಡಂ ಪಾರ್ಕಿನಲ್ಲಿ ಮತಗಳ್ಳತನ ವಿಚಾರವಾಗಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು, 6 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ರಾಹುಲ್‌ ಗಾಂಧಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಪ್ರತಿಭಟನಾ ಸ್ಥಳಕ್ಕೆ ಇನ್ನೂ ಬಂದಿಲ್ಲ.

ರಾಹುಲ್ ಗಾಂಧಿ ಆಸೀನರಾಗುವ ವೇದಿಕೆಯಲ್ಲಿ ಸಚಿವರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದು ವೇದಿಕೆಯಲ್ಲಿ ಶಾಸಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ವೇದಿಕೆಯಲ್ಲಿ ಭಾಷಣ ಬಳಿಕ 100 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗಕ್ಕೆ ತೆರಳಿ ದೂರು ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Read More
Next Story