ಕೇರಳ ಸಂತ್ರಸ್ತರಿಗಾಗಿ ದೇಣಿಗೆ ನೀಡುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ 

ನೆರೆಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸಲು ದೇಣಿಗೆ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಮೇರೆಗೆ ಸಂತ್ರಸ್ತರ ಮನೆಗಳನ್ನು ಮರುನಿರ್ಮಾಣ ಮಾಡಲು ಸಹಾಯ ಮಾಡುವಂತೆ ಸಿದ್ಧರಾಮಯ್ಯ ಅವರು ಕಾರ್ಪೊರೇಟ್‌ ಸಂಸ್ಥೆಗಳಿಗೆ ಸಂದೇಶದಲ್ಲಿ ಎಚ್ಚರಿಸಿದ್ದಾರೆ.

ದೇಣಿಗೆ ನೀಡಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಕ.ಬಿ.ಶಿವಕುಮಾರ್ ಅವರನ್ನು 9482575918 ಸಂಪರ್ಕಿಸಬಹುದು.

Read More
Next Story