ರಾಹುಲ್, ಪ್ರಿಯಾಂಕಾ ಗುರುವಾರ ವಯನಾಡಿಗೆ ಭೇಟಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಪುಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಯನಾಡ್‌ಗೆ ಭೇಟಿ ನೀಡಲಿದ್ದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಹಲವಾರು ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬುಧವಾರ ಬೆಳಿಗೆ, ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನವಿದೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವರು ಭೇಟಿಯನ್ನು ಮುಂದೂಡಿದ್ದಾರೆ.

ಉಭಯ ನಾಯಕರು ಸರ್ಕಾರಿ ಹೈಯರ್ ಸೆಕಂಡರಿ ಶಾಲೆ ಮತ್ತು ಮೆಪ್ಪಾಡಿಯ ಸೇಂಟ್ ಜೋಸೆಫ್ ಯುಪಿ ಶಾಲೆಯಲ್ಲಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಮೆಪ್ಪಾಡಿಯ ಡಾ ಮೂಪನ್ ಮೆಡಿಕಲ್‌ ಕಾಲೇಜಿಗೂ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Read More
Next Story