ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ

ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ವಿವಿಧ ಏಜೆನ್ಸಿಗಳು ಮತ್ತು ಸಶಸ್ತ್ರ ಪಡೆಗಳ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಗುರುವಾರ ವಯನಾಡಿನಲ್ಲಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿರುವ ರಾಜ್ಯದ ಸಚಿವರು, ವಯನಾಡಿನ ಶಾಸಕರು, ರಾಜಕೀಯ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕಾಂಗ್ರೆಸ್ ನಾಯಕ, ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸರ್ವಪಕ್ಷಗಳ ಸಭೆ ಬಳಿಕ ಜಿಲ್ಲೆಯ ಭೂಕುಸಿತ ಪೀಡಿತ ವುದೇಶಗಳಲ್ಲಿ ಸ್ಥಾಪಿಸಲಾದ ಪರಿಹಾರ ಶಿಬಿರಗಳಿಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Read More
Next Story