́ವೃಕ್ಷಮಾತೆ’ಯ ಕುರಿತು ಒಂದು ಚಿತ್ರ; ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ನಟಿ ಸೌಜನ್ಯ …
x

́ವೃಕ್ಷಮಾತೆ’ಯ ಕುರಿತು ಒಂದು ಚಿತ್ರ; ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ನಟಿ ಸೌಜನ್ಯ …

ಕರ್ನಾಟಕದಲ್ಲಿ ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಇದೇ ಮೊದಲ ಬಾರಿಗೆ ಅವರ ಜೀವನ ಮತ್ತು ಸಾಧನೆಯ ಕುರಿತಾಗಿ ಒಂದು ಚಲನಚಿತ್ರ ನಿರ್ಮಾಣವಾಗುತ್ತಿರುವುದು ವಿಶೇಷ.


ಕರ್ನಾಟಕದಲ್ಲಿ ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಕುರಿತು ಹಲವು ಸಾಕ್ಷ್ಯಚಿತ್ರಗಳು ನಿರ್ಮಾಣವಾಗಿವೆ. ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಹೇಳುವ ಸಾಕ್ಷ್ಯಚಿತ್ರಗಳು ಬಂದಿವೆ. ಇದೇ ಮೊದಲ ಬಾರಿಗೆ ಅವರ ಜೀವನ ಮತ್ತು ಸಾಧನೆಯ ಕುರಿತಾಗಿ ಒಂದು ಚಲನಚಿತ್ರ ನಿರ್ಮಾಣವಾಗುತ್ತಿರುವುದು ವಿಶೇಷ.

ಕನ್ನಡದಲ್ಲಿ ಕರ್ನಾಟಕದ ಹಲವು ಮಹನೀಯರ ಕುರಿತಾಗಿ ಚಿತ್ರಗಳು ನಿರ್ಮಾಣವಾಗಿವೆ. ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಕುವೆಂಪು ಅವರ ಕುರಿತು ಸಿ.ಆರ್. ಸಿಂಹ ಅಭಿನಯದಲ್ಲಿ ‘ರಸಋಷಿ ಕುವೆಂಪು’ ಎಂಬ ಚಿತ್ರ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು. ಕೆಲವು ದಿನಗಳ ಹಿಂದೆ ಡಿ.ವಿ. ಗುಂಡಪ್ಪನವರ ಬಾಲ್ಯದ ದಿನಗಳ ಕುರಿತಾಗಿ ‘ಮಂಕುತಿಮ್ಮನ ಕಗ್ಗ’ ಚಿತ್ರ ಬಂದಿತ್ತು. ಈಗ ಸಾಲುಮರದ ತಿಮ್ಮಕ್ಕನವರ ಕುರಿತು ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಎಂಬ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ.


ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತ ಈ ಚಿತ್ರವನ್ನು ‘ಒರಟ’ ಖ್ಯಾತಿಯಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ಚಿತ್ರದ ನಿರ್ಮಾಣದ ಜವಾಬ್ದಾರಿಯನ್‍ನು ಹೊತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರವು ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧಾರಿಸಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.


ಈ ಹಿಂದೆ ‘ರಾಜಾಹುಲಿ’, ‘ನಾನೊಬ್ನೆ ಒಳ್ಳೇವ್ನು’, ‘ರಿಯಲ್‍ ರಿಯಲ್‍ 2’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಸೌಜನ್ಯ, ತಿಮ್ಮಕ್ಕನ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ನೀನಾಸಂ ಅಶ್ವಥ್, ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ ಸಮಠ, ಗಣೇಶ್ ಕೇಸರ್ಕರ್, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.


‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಚಿತ್ರಕ್ಕಾಗಿ ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದೆ. ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರಿಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

ಈ ಚಿತ್ರಕ್ಕೆ ನಾಗರಾಜ್ ಛಾಯಾಗ್ರಹಣ, ಶ್ಯಾಮ್ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಶ್ರೀ ಜೊತೆಯಾಗಿ ರಚಿಸಿದ್ದಾರೆ.

Read More
Next Story