ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌.ಜೆ.ಸೂರ್ಯ
x
ಕಿಲ್ಲರ್‌ ಸಿನಿಮಾದ ಪೋಸ್ಟರ್‌

ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌.ಜೆ.ಸೂರ್ಯ

ತಮಿಳು ನಟ ಎಸ್‌.ಜೆ. ಸೂರ್ಯ ಅವರು ಗೋಕುಲಂ ಗೋಪಾಲನ್ ಮತ್ತು ಅಂಜೆಲ್ ಸ್ಟುಡಿಯೋಸ್ (ಎಸ್. ಜೆ. ಸೂರ್ಯ ಒಡೆತನದ) ಸಹಯೋಗದಲ್ಲಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.


ಬರೋಬ್ಬರಿ ಹತ್ತು ವರ್ಷಗಳ ಬಳಿಕ ತಮಿಳಿನ ಖ್ಯಾತ ನಿರ್ದೇಶಕ, ನಟ ಎಸ್. ಜೆ.ಸೂರ್ಯ ಅವರು ‘ಕಿಲ್ಲರ್’ ಸಿನಿಮಾದ ಮೂಲಕ ನಿರ್ದೇಶನಕ್ಕೆ ವಾಪಸ್ಸಾಗಿದ್ದಾರೆ.

ವಾಲಿ, ಖುಷಿ ಮತ್ತು ನ್ಯೂ ಎಂಬ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಎಸ್. ಜೆ.ಸೂರ್ಯ ಅವರು ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳುವ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

‘ಕಿಲ್ಲರ್’ ಸಿನಿಮಾ ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ. ದೇಶದಾದ್ಯಂತ ಪ್ರೇಕ್ಷಕರನ್ನು ಆಕರ್ಷಿಸಲು ಸಿದ್ಧವಾಗಲಿರುವ ಈ ಚಿತ್ರದಲ್ಲಿ, ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದರು ಹಾಗೂ ತಾಂತ್ರಿಕ ತಂಡ ಇರಲಿದೆ. ಚಿತ್ರದ ಕುರಿತಾಗಿ ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ಚಿತ್ರತಂಡ ನೀಡಲಿದೆ.

ಗೋಕುಲಂ ಗೋಪಾಲನ್ ಮತ್ತು ಅಂಜೆಲ್ ಸ್ಟುಡಿಯೋಸ್ (ಎಸ್. ಜೆ. ಸೂರ್ಯ ಒಡೆತನದ) ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ವಿ.ಸಿ.ಪ್ರವೀಣ್ ಮತ್ತು ಬೈಜು ಗೋಪಾಲನ್ ಈ ಚಿತ್ರದ ಸಹ-ನಿರ್ಮಾಪಕರಾಗಿದ್ದಾರೆ. ಕೃಷ್ಣಮೂರ್ತಿ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ.

ಶ್ರೀಗೋಕುಲಂ ಮೂವೀಸ್ ಸಂಸ್ಥೆಯು ಮಲಯಾಳಂ ಚಿತ್ರರಂಗದಲ್ಲಿ ಹಲವು ಸಿನಿಮಾ ನಿರ್ಮಾಣ ಮಾಡುತ್ತಿದೆ. ಸುರೇಶ್ ಗೋಪಿ ಅಭಿನಯದ ಒಟ್ಟಕೋಂಬನ್, ಜಯಸೂರ್ಯ ಅಭಿನಯದ ಕಥನಾರ್, ದಿಲೀಪ್ ಅಭಿನಯದ ಭಾ ಭಾ ಬಾ ಸಿನಿಮಾ ಕೆಲಸಗಳಲ್ಲಿ ಮಾಡುತ್ತಿರುವುದರೊಂದಿಗೆ ಕಿಲ್ಲರ್‌ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದೆ.

Read More
Next Story