
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್
ನಟನೆಗೆ ಮರಳಿದ ಗೀತರಚನೆಕಾರ
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ಅವರು 'ಕೃಷ್ಣಾವತಾರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ಅವರು 'ಕೃಷ್ಣಾವತಾರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಲಿಯುಗದಲ್ಲಿ ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆಯನ್ನು ಈ ಸಿನಿಮಾ ಹೊಂದಿದ್ದು, ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಮಾಯಾಬಜಾರ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುಪ್ರಸಾದ್ ಕೆ. ಬಂಡವಾಳ ಹೂಡಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿದ್ದಾರೆ.
ಈ ಚಿತ್ರಕ್ಕೆ ರಾಜ ಶಿವಶಂಕರ್ ಛಾಯಾಗ್ರಹಣವಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಮುಂತಾದವರು ತಾರಾಗಣದಲ್ಲಿದ್ದಾರೆ.
Next Story