ಕೃಷ್ಣಂ ಪ್ರಣಯ ಸಖಿ ಸಿನಿಮಾದ ಮೂರನೇ ಹಾಡು ರಿಲೀಸ್‌
x
ಕೃಷ್ಣಂ ಪ್ರಣಯ ಸಖಿʼ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ.

ಕೃಷ್ಣಂ ಪ್ರಣಯ ಸಖಿ ಸಿನಿಮಾದ ಮೂರನೇ ಹಾಡು ರಿಲೀಸ್‌

ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ʻಕೃಷ್ಣಂ ಪ್ರಣಯ ಸಖಿʼ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ.


Click the Play button to hear this message in audio format

ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ʻಕೃಷ್ಣಂ ಪ್ರಣಯ ಸಖಿʼ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಸಿನಿಮಾದಲ್ಲಿದ್ದು,‌ ಆ ಪೈಕಿ ಈಗಾಗಲೇ "ಮೈ ಮ್ಯಾರೇಜ್ ಇಸ್ ಫಿಕ್ಸ್ಡ್" ಹಾಗೂ "ಚಿನ್ನಮ್ಮ" ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ.

ಇದೀಗ ಈ ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರ ಪ್ರಸಾದ್ ಬರೆದಿರುವ ʻದ್ವಾಪರ ದಾಟುತʼ ಎಂಬ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಹಾಡನ್ನು ಸರಿಗಮಪ ಖ್ಯಾತಿಯ ಜಸ್ಕರಣ್ ಸಿಂಗ್ ಹಾಡಿದ್ದಾರೆ. ಹಾಡುಗಳ ಮೂಲಕ ಈಗಾಗಲೇ ಗೆದ್ದಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ʻಕೃಷ್ಣಂ ಪ್ರಣಯ ಸಖಿʼ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸಿದ್ದಾರೆ. ಶರಣ್ಯಾ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Read More
Next Story