ವಿಜಯರಾಘವೇಂದ್ರ ನಟನೆಯ ‘ಸ್ವಪ್ನಮಂಟಪ’  ಬಿಡುಗಡೆಗೆ ಸಿದ್ಧ; ಈ ಸಿನಿಮಾದ ವಿಶೇಷತೆಯೇನು|
x

ಸ್ವಪ್ನಮಂಟಪ ಸಿನಿಮಾ ಜುಲೈ 25ಕ್ಕೆ ಬಿಡುಗಡೆಯಾಗಲಿದೆ. 

ವಿಜಯರಾಘವೇಂದ್ರ ನಟನೆಯ ‘ಸ್ವಪ್ನಮಂಟಪ’ ಬಿಡುಗಡೆಗೆ ಸಿದ್ಧ; ಈ ಸಿನಿಮಾದ ವಿಶೇಷತೆಯೇನು|

ಬರಗೂರು ರಾಮಚಂದ್ರಪ್ಪ ‘ಸ್ವಪ್ನಮಂಟಪ’ ಸಿನಿಮಾಗೆ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ವಿಜಯರಾಘವೇಂದ್ರ ನಾಯಕನಾಗಿ ಹಾಗೂ ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ.


Click the Play button to hear this message in audio format

ಪ್ರೊ.ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಸಿನಿಮಾ ಜುಲೈ 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಬರಗೂರು ರಾಮಚಂದ್ರಪ್ಪ ಈ ಸಿನಿಮಾಗೆ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ವಿಜಯರಾಘವೇಂದ್ರ ನಾಯಕನಾಗಿ ಹಾಗೂ ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ.

‘ಸ್ವಪ್ನಮಂಟಪ’ವು ಬರಗೂರರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ಕಥಾ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವ ಮತ್ತು ಅನೇಕ ತಿರುವುಗಳನ್ನು ಒಳಗೊಂಡಿರುವ ಕಥಾವಸ್ತು ಈ ಚಿತ್ರದಲ್ಲಿದೆ.

ಮೈಸೂರಿನ ಬಾಬುನಾಯಕ್ ಅವರು ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸುಂದರರಾಜ್, ಶೋಭಾ ರಾಘವೇಂದ್ರ, ರಜನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಮೈಸೂರು ಮಂಜುಳ ಮುಂತಾದವರು ತಾರಾಗಣದಲ್ಲಿದ್ದಾರೆ. ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ, ಹೊಸ್ಮನೆ ಮೂರ್ತಿ ಕಲಾವಿನ್ಯಾಸ, ನಟರಾಜ್‍ಶಿವು ಮತ್ತು ಪ್ರವೀಣ್, ಸಹ ನಿರ್ದೇಶನ ಈ ಚಿತ್ರಕ್ಕಿದೆ. ಎಚ್.ಪಿ. ಕವಿತಾ. ಈ ಸಿನಿಮಾದ ಸಹ ನಿರ್ಮಾಪಕರಾಗಿದ್ದಾರೆ.

Read More
Next Story