ಆರ್‌ಸಿಬಿ ವಿಜಯೋತ್ಸವ; ಎರಡು ಗಂಟೆಗಳ ಕಾರ್ಯಕ್ರಮಕ್ಕೆ ಬರೋಬ್ಬರಿ 15ಕೋಟಿ ಖರ್ಚು?
x

ಬೆಂಗಳೂರಿನಲ್ಲಿ ನಡೆದ ವಿಯಯೋತ್ಸವ

ಆರ್‌ಸಿಬಿ ವಿಜಯೋತ್ಸವ; ಎರಡು ಗಂಟೆಗಳ ಕಾರ್ಯಕ್ರಮಕ್ಕೆ ಬರೋಬ್ಬರಿ 15ಕೋಟಿ ಖರ್ಚು?

ಬುಧವಾರ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಿದ್ದ ಆರ್‌ಸಿಬಿ ವಿಜಯೋತ್ಸವಕ್ಕೆ ಸುಮಾರು 15 ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚವಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.


ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸುಮಾರು 2 ಗಂಟೆಗಳ ಆರ್‌ಸಿಬಿ 'ವಿಜಯೋತ್ಸವ' ಕಾರ್ಯಕ್ರಮಕ್ಕೆ ಸುಮಾರು 15 ಕೋಟಿ ರೂ.ಗಳಿಂತ ಹೆಚ್ಚು ಹಣ ಖರ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಸಂಘಟನೆಯ ಜವಾಬ್ದಾರಿ ಹೊತ್ತಿದ್ದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯು ಕಾರ್ಯಕ್ರಮಕ್ಕಾಗಿ 15 ಕೋಟಿ ರೂ. ಖರ್ಚು ಮಾಡಿತ್ತು ಎನ್ನಲಾಗಿದೆ. ಡಿಎನ್‌ಎ ಇವೆಂಟ್ಸ್‌ ಸಂಸ್ಥೆಯು ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಕ್ಕಳಿಗೆ ಸೇರಿದ್ದು, ಪ್ರಭಾವ ಬಳಸಿ ಕಾರ್ಯಕ್ರಮದ ಆಯೋಜನೆಯ ಜವಾಬ್ದಾರಿ ಪಡೆದಿತ್ತು ಎಂದು ಮೂಲಗಳು ತಿಳಿಸಿವೆ.

ಆರ್‌ಸಿಬಿ ವಿಜಯೋತ್ಸವವನ್ನು ಶನಿವಾರ ಹಮ್ಮಿಕೊಳ್ಳಲು ಮೊದಲಿಗೆ ಉದ್ದೇಶಿಸಲಾಗಿತ್ತು. ಆದರೆ, ಪ್ರಮುಖ ಸಚಿವರೊಬ್ಬರ ಒತ್ತಡದ ಕಾರಣ ತರಾತುರಿಯಲ್ಲಿ ಬುಧವಾರವೇ ನಿಗದಿ ಮಾಡಲಾಯಿತು. ಹೀಗಾಗಿ ಕ್ರೀಡಾಂಗಣ ಮತ್ತು ವಿಧಾನಸೌಧದ ಬಳಿ ಸೇರಬಹುದಾದ ಜನಸಂಖ್ಯೆ ಮತ್ತು ಅದನ್ನು ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಯೋಚಿಸುವಲ್ಲಿ ಡಿಎನ್‌ಎ ಸಂಸ್ಥೆ ಎಡವಿತ್ತು ಎಂದು ಹೇಳಲಾಗಿದೆ.

ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಉಂಟಾದ ಸಾವು - ನೋವುಗಳಿಗೆ ಸಂಬಂಧಿಸಿ ಆರ್‌ಸಿಬಿಯ ಮಾರ್ಕೆಟಿಂಗ್‌ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನಿಲ್ ಮ್ಯಾಥ್ಯು, ಕಿರಣ್ ಮತ್ತು ಸುಮಂತ್ ಎಂಬುವರನ್ನು ಕೇಂದ್ರ ಅಪರಾಧ ದಳ ಹಾಗೂ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read More
Next Story