Actor Darshan Case | ದರ್ಶನ್‌, ಪವಿತ್ರಾಗೌಡ ಸೇರಿ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
x
ನಟ ದರ್ಶನ್‌

Actor Darshan Case | ದರ್ಶನ್‌, ಪವಿತ್ರಾಗೌಡ ಸೇರಿ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್‌ ಹಾಗೂ ಗ್ಯಾಂಗ್‌ನ ನ್ಯಾಯಾಂಗ ಬಂಧನವನ್ನು ಸೆ.17ರ ವರೆಗೆ ವಿಸ್ತರಿಸಿ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.


Click the Play button to hear this message in audio format

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್‌ ಹಾಗೂ ಗ್ಯಾಂಗ್‌ನ ನ್ಯಾಯಾಂಗ ಬಂಧನವನ್ನು ಸೆ.17ರ ವರೆಗೆ ವಿಸ್ತರಿಸಿ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಶುಕ್ರವಾರ(ಸೆ.13) ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ದೀಪಕ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್ ಹಾಗೂ ರವಿ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು. ಹಾಜರಾಗುತ್ತಿದ್ದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸರತಿಯಂತೆ ಆರೋಪಿಗಳ ಹೆಸರು ಕೂಗಿ ಎಲ್ಲರ ಇರುವಿಕೆ ಬಗ್ಗೆ ಖಚಿತಪಡಿಸಿಕೊಂಡರು.

ಆರೋಪಿಗಳ ಪರ ವಕೀಲರು ವಾದ ಮಂಡಿಸಿ, ''ಸಂಪೂರ್ಣ ಚಾರ್ಜ್ ಶೀಟ್ ಒದಗಿಸಿಲ್ಲ. ಡಿಜಿಟಲ್ ಎವಿಡೆನ್ಸ್ ಸಹ ಪೊಲೀಸರು ನೀಡಿಲ್ಲ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿಂತೆ ಸಿಆರ್​​​ಪಿಸಿ 164 ಅಡಿ ಹೇಳಿಕೆ ನೀಡಿದ ಪ್ರಮಾಣೀಕೃತ ದಾಖಲಾತಿ ನೀಡಿಲ್ಲ'' ಎಂದು ಕೋರ್ಟ್ ಗಮನಕ್ಕೆ ತಂದರು.

ಎಸ್​ಪಿಪಿ ಪರ ವಕೀಲ ಪ್ರಸನ್ನ ಕುಮಾರ್, ''ಮುಂದಿನ ವಾರ ಡಿಜಿಟಲ್ ಎವಿಡೆನ್ಸ್​ಗಳನ್ನು ಸಲ್ಲಿಸಲಾಗುವುದು'' ಎಂದು ಮಾಹಿತಿ ನೀಡಿದರು. ಬಳಿಕ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.​ 17ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿತು.

Read More
Next Story