ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ; 40 ಟನ್ ಅಕ್ಕಿ ಜಪ್ತಿ ಮಾಡಿದ ಅಧಿಕಾರಿಗಳು
x

ಅನ್ನಭಾಗ್ಯ ಅಕ್ಕಿ ಜಪ್ತಿ ಮಾಡಿದ ಅಧಿಕಾರಿಗಳು 

ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ; 40 ಟನ್ ಅಕ್ಕಿ ಜಪ್ತಿ ಮಾಡಿದ ಅಧಿಕಾರಿಗಳು

600ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು.


ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದವರ ಮೇಲೆ ಆಹಾರ ಮತ್ತು ನಾಗರಿಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ವಿಜಯಪುರ ನಗರದ ಹೊರಭಾಗದ ಎನ್​ಎಚ್ 50 ರಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು. 600ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ವೇಳೆ ಆಹಾರ ಮತ್ತು ನಾಗರಿಕ ಇಲಾಖೆಯ ಮ್ಯಾನೇಜರ್ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಲಾರಿ ತಡೆಯುತ್ತಲೇ ಚಾಲಕ ಹಾಗೂ ಕ್ಲೀನರ್ ಓಡಿ ಹೋಗಿದ್ದಾರೆ. ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಶಿವಮೊಗ್ಗದ ಸಾಗರ ಭಾಗದಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಸಂಶಯ ಆಧಿಕಾರಿಗಳಲ್ಲಿ ಮೂಡಿದೆ.

Read More
Next Story