Save Karnataka Tigers | ವಿಷಪ್ರಾಶನದಿಂದ ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರದಲ್ಲಿ ಹೆಣ್ಣು ಹುಲಿ ನಿಗೂಢ ಸಾವು
x

ಸಾಂದರ್ಭಿಕ ಚಿತ್ರ

Save Karnataka Tigers | ವಿಷಪ್ರಾಶನದಿಂದ ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರದಲ್ಲಿ ಹೆಣ್ಣು ಹುಲಿ ನಿಗೂಢ ಸಾವು

4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಶನಿವಾರ ವೈದ್ಯರು ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.


ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿದೆ.

4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು(ಶನಿವಾರ) ವೈದ್ಯರು ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಐದು ಹುಲಿಗಳ ಸಾವು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುವುದು ಖಚಿತವಾಗಿದೆ. ಆದರೆ ಈ ವಿಷ ಯಾವುದು? ಎಷ್ಟು ಪ್ರಮಾಣದಲ್ಲಿ ಹಾಕಲಾಗಿತ್ತು ಎಂದು ತಿಳಿಯಲು ಪ್ರಯೋಗಾಲಯಕ್ಕೆ ಸ್ಯಾಂಪಲ್‌ ಕಳಿಸಲಾಗಿದೆ.

ಹಸುವಿನ ಮೇಲೆ ದಾಳಿ ನಡೆಸಿದ ಸೇಡಿಗೆ ವಿಷವಿಟ್ಟಿರುವ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ, ಶಂಕಿತ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಡಿಸಿಎಫ್‌ ಸ್ಪಷ್ಟನೆ ನೀಡಿದ್ದಾರೆ.

ನಾಡಿಗೆ ನುಗ್ಗಿ ಹುಲಿ ಬೇಟೆಯಾಡಿಲ್ಲ. ಬದಲಾಗಿ ಕಾಡಿಗೆ ಬಂದಿರುವ ಹಸುವನ್ನೇ ಹುಲಿ ಬೇಟೆಯಾಡಿದೆ. ಜನರು ತಮ್ಮ ಪ್ರಾಣಿಗಳನ್ನು ಕಾಡಿಗೆ ಬಿಡಬಾರದು. ಬಿಟ್ಟರೆ ಪರಿಹಾರ ಸಿಗುವುದಿಲ್ಲ ಎಂದು ಡಿಸಿಎಫ್‌ ಹೇಳಿದ್ದಾರೆ.

ಹುಲಿಗಳು ಮತ್ತು ಹಸು ಮೃತಪಟ್ಟ ಸ್ಥಳದಲ್ಲೇ ಅರಣ್ಯ ಸಿಬ್ಬಂದಿ ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಹುಲಿಯ 5 ಮರಿಗಳು ಹಾಗೂ ಹಸುವಿನ ಅಂತ್ಯಕ್ರಿಯೆ ಪ್ರತ್ಯೇಕವಾಗಿ ಮಾಡಲಾಗಿದೆ. ಈ ವೇಳೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಇದ್ದರು. ಬಳಿಕ ಮಾತನಾಡಿದ ಅವರು, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Read More
Next Story