ಬುಕಿಂಗ್ ಕ್ಯಾನ್ಸಲ್ ಮಾಡಿದ ವಿದ್ಯಾರ್ಥಿನಿಗೆ ಆಟೋ ಚಾಲಕನಿಂದ ಹಲ್ಲೆ..!
x
ಓಲಾ ಆಟೋ ಬುಕಿಂಗ್ ಕ್ಯಾನಲ್ ಮಾಡಿದ್ದಕ್ಕೆ ಹೊರರಾಜ್ಯದ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.

ಬುಕಿಂಗ್ ಕ್ಯಾನ್ಸಲ್ ಮಾಡಿದ ವಿದ್ಯಾರ್ಥಿನಿಗೆ ಆಟೋ ಚಾಲಕನಿಂದ ಹಲ್ಲೆ..!

ಓಲಾ ಆಟೋ ಬುಕಿಂಗ್ ಕ್ಯಾನಲ್ ಮಾಡಿದ್ದಕ್ಕೆ ಹೊರರಾಜ್ಯದ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಆರೋಪದಡಿ ಆಟೋ ಚಾಲಕನನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಓಲಾ ಆಟೋ ಬುಕಿಂಗ್ ಕ್ಯಾನಲ್ ಮಾಡಿದ್ದಕ್ಕೆ ಹೊರರಾಜ್ಯದ ವಿದ್ಯಾರ್ಥಿ ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಆರೋಪದಡಿ ಆಟೋ ಚಾಲಕನನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಕಲ್ಲಸಂದ್ರದ ಮುತ್ತುರಾಜ್ ಬಂಧಿತ ಆಟೋ ಚಾಲಕ. ಸೆ.2ರಂದು ರಾಜಾಜಿನಗರದ ಡಾ. ರಾಜ್ ಕುಮಾರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ನೀತಿ ಶರ್ಮಾ ನೀಡಿದ ದೂರಿನ ಮೇಲೆ ಆಟೋ ಚಾಲಕನ್ನು ಬಂಧಿಸಿ ವಿಚಾರಣೆಗೆ ಒಳ ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀತಿ ಶರ್ಮಾ ಮತ್ತು ಆಕೆಯ ಸ್ನೇಹಿತೆ ಪ್ರತ್ಯೇಕವಾಗಿ ಓಲಾ ಆ್ಯಪ್ ನಲ್ಲಿ ಆಟೋರಿಕ್ಷಾ ಬುಕ್ ಮಾಡಿದ್ದರು. ನೀತಿ ಶರ್ಮಾ ಬುಕ್ ಮಾಡಿದ್ದ ಆಟೋ ನಿಗದಿತ ಸ್ಥಳಕ್ಕೆ ಮೊದಲು ಬಂದಿತ್ತು. ಈ ವೇಳೆ ಸ್ನೇಹಿತೆ ಮಾಡಿದ್ದ ಆಟೋವನ್ನು ಕ್ಯಾನ್ಸಲ್ ಮಾಡಿದ್ದಾರೆ. ಬಳಿಕ ಇಬ್ಬರು ಒಂದೇ ಆಟೋ ರಿಕ್ಷಾ ಏರಿ ಹೊರಟ್ಟಿದ್ದಾರೆ.

ಅಷ್ಟರಲ್ಲಿ ಸ್ಥಳಕ್ಕೆ ಬಂದಿದ್ದ ಆಟೋ ಚಾಲಕ ಮುತ್ತುರಾಜ್, ನೀತಿ ಹಾಗೂ ಆಕೆಯ ಸ್ನೇಹಿತೆ ಪ್ರಯಾಣಿಸುತ್ತಿದ್ದ ಆಟೋ ತಡೆದು ಏಕೆ ಬುಕಿಂಗ್ ಕ್ಯಾನ್ಸಲ್ ಮಾಡಿದ್ದು ಎಂದು ಪ್ರಶ್ನಿಸಿದ್ದಾನೆ. ಈ ವೇಳೆ ನೀತಿ ಸ್ನೇಹಿತೆ ಬೇಗ ಕಾಲೇಜಿಗೆ ಹೋಗಬೇಕಿತ್ತು. ನಾನು ಬುಕ್ ಮಾಡಿದ್ದ ಆಟೋ ಬೇಗ ಬಂದಿದ್ದರಿಂದ ನಿಮ್ಮ ಆಟೋ ಕ್ಯಾನ್ಸಲ್ ಮಾಡಿದೆವು ಎಂದಿದ್ದಾರೆ. ಚಾಲಕ ಮುತ್ತುರಾಜ್, ನೀತಿ ಶರ್ಮಾ ಅವರನ್ನು ಅಚಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಲು ಮುಂದಾದಾಗ, ಆಕೆಯ ಕೈಗೆ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಬಳಿಕ ನೀತಿ ಶರ್ಮಾ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಮಧ್ಯ ಪ್ರವೇಶಿಸಿ, ಮುತ್ತುರಾಜ್‌ನನ್ನು ಸಮಾಧಾನಪಡಿಸಿ ಸ್ಥಳದಿಂದ ಕಳುಹಿಸಿದ್ದಾರೆ. ಚಾಲಕ ಮುತ್ತುರಾಜ್ ವರ್ತನೆ ವಿಡಿಯೋ ಹಂಚಿಕೊಂಡು ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಓಲಾ ಕಂಪನಿ ಹಾಗೂ ನಗರ ಪೊಲೀಸರಿಗೂ ಟ್ಯಾಗ್ ಮಾಡಿದ್ದರು.

ಘಟನೆ ನಡೆದ ಸ್ಥಳದ ಆಧಾರದ ಮೇಲೆ ಮಾಗಡಿ ರಸ್ತೆ ಠಾಣೆ ಪೊಲೀಸರು, ನೀತಿ ಶರ್ಮಾ ಅವರ ದೂರಿಗೆ ಸ್ಪಂದಿಸಿದ್ದಾರೆ. ನೀತಿಯಿಂದ ಲಿಖಿತ ದೂರು ಪಡೆದು ಪ್ರಕರಣ ದಾಖಲಿಸಿ, ಆಟೋ ಚಾಲಕ ಮುತ್ತುರಾಜ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story