ಜಾತಿ ಗಣತಿ ವರದಿ | ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲಿಸಬೇಕು: ಮಲ್ಲಿಕಾರ್ಜುನ ಖರ್ಗೆ
x

ಜಾತಿ ಗಣತಿ ವರದಿ | ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಜಾತಿ ಗಣತಿ ವರದಿಯ ಬಗ್ಗೆ ಅಪಸ್ವರ ಎತ್ತಿದ್ದರು.


ಬೆಂಗಳೂರು: ಜಾತಿ ಗಣತಿ ವರದಿಗೆ ಸ್ವಪಕ್ಷೀಯರಿಂದಲೇ ಅಪಸ್ವರ ಕೇಳಿ ಬರುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಪಕ್ಷದ ನಿರ್ಣಯವನ್ನು ಎಲ್ಲರೂ ಪಾಲಿಸಬೇಕೆಂದು ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ʼಸಿದ್ದರಾಮಯ್ಯ ಇರಲಿ, ಡಿಕೆ ಶಿವಕುಮಾರ್ ಇರಲಿ.. ಪಕ್ಷದ ನಿರ್ಣಯವನ್ನು ಎಲ್ಲರೂ ಪಾಲಿಸಬೇಕುʼ ಎಂದಿದ್ದಾರೆ.

ʼಎಐಸಿಸಿ ಮಟ್ಟದಿಂದ ನಾನು ಈ ಮಾತು ಹೇಳುತ್ತಿದ್ದೇನೆ, ನಾವು ಹೇಳುವುದನ್ನು ಸಿದ್ದರಾಮಯ್ಯ ಅವರು ಕೇಳಬೇಕು, ಡಿಕೆ ಶಿವಕುಮಾರ್ ಕೇಳಬೇಕು, ಕೆಜೆ ಜಾರ್ಜ್ ಕೂಡಾ ಕೇಳಬೇಕು, ಮುಂದೆ ಯಾರೇ ಪಕ್ಷಕ್ಕೆ ಸೇರಿದರೂ ಈ ವಿಚಾರದಲ್ಲಿ ಪಕ್ಷದ ನಿಲುವನ್ನು ಅನುಸರಿಸಬೇಕುʼ ಎಂದು ಖರ್ಗೆ ಅವರು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಜಾತಿ ಗಣತಿ ವರದಿಯ ಬಗ್ಗೆ ಅಪಸ್ವರ ಎತ್ತಿದ್ದರು.

Read More
Next Story