Channapatna by-poll | ಅಭ್ಯರ್ಥಿ ಆಯ್ಕೆ: ಪಕ್ಷದ ಮುಖಂಡರೊಂದಿಗೆ ಕುಮಾರಸ್ವಾಮಿ ಚರ್ಚೆ
x
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ಡಿ ಕುಮಾರಸ್ವಾಮಿ

Channapatna by-poll | ಅಭ್ಯರ್ಥಿ ಆಯ್ಕೆ: ಪಕ್ಷದ ಮುಖಂಡರೊಂದಿಗೆ ಕುಮಾರಸ್ವಾಮಿ ಚರ್ಚೆ

ಸಿ ಪಿ ಯೋಗೇಶ್ವರ್ ಅವರನ್ನು ಕಣಕ್ಕಿಳಿಸುವಂತೆ ಸಭೆಯಲ್ಲಿ ಮನವಿ ಮಾಡಿದರು. ಜೆಡಿ (ಎಸ್) ಪ್ರತ್ಯೇಕ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಕೇಸರಿ ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿಯನ್ನು ಕಣಕ್ಕಿಳಿಸುವಂತೆ ಅವರು ಕೇಳಿಕೊಂಡರು.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾರನ್ನು ಕಣಕ್ಕಿಳಿಸುವುದು ಎಂಬ ಸಂಗತಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ತೀವ್ರ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಸಿ ಪಿ ಯೋಗೇಶ್ವರ್‌ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಜೆಡಿಎಸ್‌ ನಿಂದಲೂ ಹಲವು ಮುಖಂಡರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಇದೀಗ ಈ ಬಗ್ಗೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಸಭೆ ನಡೆಸಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜನತಾ ದಳ (ಜೆಡಿಎಸ್‌) ಮುಖಂಡರೊಂದಿಗೆ ಚರ್ಚಿಸಿ ಉಪಚುನಾವಣೆಯಲ್ಲಿ ಜೆಡಿಎಸ್ ಅಥವಾ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಗುರುವಾರ ಕರ್ನಾಟಕ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಂಎಲ್ ಎ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಅಶ್ವತ್ಥನಾರಾಯಣ, ಸಿಟಿ ರವಿ ಸೇರಿದಂತೆ ಬಿಜೆಪಿ ಮುಖಂಡರೊಂದಿಗೆ ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಸಭೆ ನಡೆಸಿದರು. ಚನ್ನಪಟ್ಟಣ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಚರ್ಚೆ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕೂಡ ಭಾಗವಹಿಸಿದ್ದರು.

ಚನ್ನಪಟ್ಟಣ ಜೆಡಿಎಸ್‌ ಭದ್ರಕೋಟೆ

ವಿಧಾನಸಭಾ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿರುವುದರಿಂದ ಪಕ್ಷದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡುವುದು ತುಂಬಾ ಬೇಗ ಎಂದು ಕುಮಾರಸ್ವಾಮಿ ಸಭೆಯಲ್ಲಿ ಹೇಳಿದರು. ಬಿಜೆಪಿಗೆ ಸ್ಥಾನ ನೀಡಲು ನಿರಾಕರಿಸಿದ ಕುಮಾರಸ್ವಾಮಿ, ಚನ್ನಪಟ್ಟಣ ಜೆಡಿಎಸ್‌ ಭದ್ರ ಕೋಟೆ. ಚನ್ನಪಟ್ಟಣದಲ್ಲಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಬಿಜೆಪಿಗೆ ಸ್ಥಾನವನ್ನು ಬಿಟ್ಟುಕೊಡಬೇಕೇ ಅಥವಾ ಜೆಡಿಎಸ್ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ ಬಳಿಕ ತೆರವಾಗಿತ್ತು. ಆದರೂ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಚನ್ನಪಟ್ಟಣ ಹೊರತು ಪಡಿಸಿ ರಾಜ್ಯದ ಇನ್ನೆರಡು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವ್ ಮತ್ತು ಸಂಡೂರು ಕ್ಷೇತ್ರಗಳಲ್ಲೂ ಉಪಚುನಾವಣೆ ಎದುರಾಗಲಿದೆ.

ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ಮೂರು ವಿಧಾನಸಭಾ ಉಪಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ಎರಡೂ ಮೈತ್ರಿ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ. ನಾವು ಒಟ್ಟಾಗಿ ಹೋರಾಡುತ್ತೇವೆ, ನಾವು ಕಾಂಗ್ರೆಸ್ ಅನ್ನು ಸೋಲಿಸಬಹುದು ಎಂದು ಅವರು ಹೇಳಿದ್ದಾರೆ.

Read More
Next Story