ಪ್ರಜ್ವಲ್‌ ಪ್ರಕರಣ ಸಂಬಂಧ ಹೇಳಿಕೆ;  ರಾಹುಲ್‌ ವಿರುದ್ಧ ಪಿಐಎಲ್‌ ತಳ್ಳಿ ಹಾಕಿದ ಹೈಕೋರ್ಟ್‌, ಅರ್ಜಿದಾರರಿಗೆ ದಂಡ
x

ಪ್ರಜ್ವಲ್‌ ಪ್ರಕರಣ ಸಂಬಂಧ ಹೇಳಿಕೆ; ರಾಹುಲ್‌ ವಿರುದ್ಧ ಪಿಐಎಲ್‌ ತಳ್ಳಿ ಹಾಕಿದ ಹೈಕೋರ್ಟ್‌, ಅರ್ಜಿದಾರರಿಗೆ ದಂಡ


ಅತ್ಯಾಚಾರ ಮತ್ತು ಮಹಿಳೆಯರ ವೀಡಿಯೋ ಚಿತ್ರೀಕರಣ ನಡೆಸಿದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕುರಿತಾಗಿ ನೀಡಿದ ಹೇಳಿಕೆ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಯನ್ನು ಕರ್ನಾಟಕ ಹೈಕೋರ್ಟ ವಜಾಗೊಳಿಸಿದೆ. ಜತೆಗೆ ಅರ್ಜಿದಾರರಿಗೆ ನ್ಯಾಯಾಲಯದ ಸಮಯ ವ್ಯರ್ಥಮಾಡಿರುವ ಕಾರಣಕ್ಕಾಗಿ 25ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ.

ಘಟನೆ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ "ಪ್ರಜ್ವಲ್‌ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಚಿತ್ರೀಕರಣ ನಡೆಸಿದ್ದಾರೆʼ ಎಂದು ಆರೋಪಿಸಿದ್ದರು. ಹಾಗೂ ಇದೊಂದು "ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರʼ ಎಂದು ಹೇಳಿಕೆ ನೀಡಿದ್ದರು. ಇದು ಭಾರತೀಯ ಮಹಿಳೆಯರ ಘನತೆಗೆ ಧಕ್ಕೆ ತಂದ ಹೇಳಿಕೆ ಹಾಗೂ ಈ ಬಗ್ಗೆ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂದು ಅರ್ಜಿದಾರ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಪರ ವಕೀಲರು ಪಿಐಎಲ್‌ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿ ಅವರು ತಮ್ಮ ಬೇಜವಾಬ್ದಾರಿ ಹೇಳಿಕೆಗಳಿಂದ ಭಾರತೀಯ ಮಹಿಳೆಯರ, ವಿಶೇಷವಾಗಿ ಹಾಸನದ ಮಹಿಳೆಯರ ನಮ್ರತೆಯನ್ನು ಆಕ್ರೋಶಗೊಳಿಸಿದ್ದಾರೆ. ಹಾಗಾಗಿ ರಾಹುಲ್‌ ಗಾಂಧಿ ಅವರಿಗೆ ನೊಟೀಸ್‌ ಜಾರಿ ಮಾಡುವಂತೆ ಅವರು ನ್ಯಾಯಾಲಯವನ್ನು ಕೋರಲಾಗಿತ್ತು. "ರಾಹುಲ್‌ ಈ ಹಿಂದೆ ಅವರು 'ಮೋದಿ' ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂದು ಹೇಳಿದ್ದರು. ಅವರ (ಗಾಂಧಿ) ಸ್ವಂತ ಪೌರತ್ವವನ್ನು ಪ್ರಶ್ನಿಸಲಾಗಿದೆ ಮತ್ತು ದೆಹಲಿ ಹೈಕೋರ್ಟ್ ಈ ವಿಷಯವನ್ನು ವಶಪಡಿಸಿಕೊಂಡಿದೆ. ಪ್ರಜ್ವಲ್‌ ಕುರಿತ ಅವರ ಹೇಳಿಕೆ ಭಾರತೀಯ ಮಹಿಳೆಯರ ಘನತೆಗೆ ಅಪಾಯವನ್ನುಂಟುಮಾಡುತ್ತದೆ, " ಎಂದು ಅರ್ಜಿದಾರರ ವಕೀಲರು ವಾದಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ಎನ್‌.ವಿ. ಅಂಜಾರಿಯಾ ಮತ್ತು ಜ| ಕೆ.ವಿ. ಅರವಿಂದ್ ಅವರು "ಈ ಪಿಐಎಲ್ ನ್ಯಾಯಾಂಗದ ಸಮಯವನ್ನು ವ್ಯರ್ಥ ಮಾಡುತ್ತಿದೆ," ಎಂದು ಅಭಿಪ್ರಾಯಪಟ್ಟಿದ್ದಾರೆ ಮತ್ತು ಅರ್ಜಿದಾರರಿಗೆ ದಂಡವನ್ನೂ ವಿಧಿಸಿದ್ದಾರೆ.

Read More
Next Story