ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ | ಬಿಜೆಪಿ ಮುಖಂಡ ಡಿ ಎಸ್ ವೀರಯ್ಯ ಬಂಧನ
x

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ | ಬಿಜೆಪಿ ಮುಖಂಡ ಡಿ ಎಸ್ ವೀರಯ್ಯ ಬಂಧನ

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಶುಕ್ರವಾರ (ಜುಲೈ 12)ವೀರಯ್ಯ ಅವರನ್ಜು ಬಂಧಿಸಿದ್ದಾರೆ.


ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಹಗರಣ ಸಂಬಂಧ ನಿಗಮದ ಮಾಜಿ ಅಧ್ಯಕ್ಷರಾದ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಶುಕ್ರವಾರ (ಜುಲೈ 12)ವೀರಯ್ಯ ಅವರನ್ಜು ಬಂಧಿಸಿದ್ದಾರೆ.

2021ರಿಂದ 2023ರ ನಡುವೆ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ ನಡೆದಿದೆ ಎನ್ನಲಾದ 47.10 ಕೋಟಿ ರೂಪಾಯಿ ಅಕ್ರಮದ ಬಗ್ಗೆ ವ್ಯವಸ್ಥಾಪಕ ನಿರ್ದೇಶಕ ವಿಲ್ಸನ್​​ ಗಾರ್ಡನ್‌​ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ 2023 ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು.

ನಿಗಮದ ಅಂದಿನ ಅಧ್ಯಕ್ಷರಾಗಿದ್ದ ವೀರಯ್ಯ ವಿರುದ್ಧ ಭಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಅಕ್ರಮದ ಹಿನ್ನೆಲೆ

2021ರ ಅಕ್ಟೋಬರ್ 25ರಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು.

ಆದರೆ ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿ ಆದೇಶಿಸಿತು.

Read More
Next Story