ಜೈನ ಧರ್ಮದ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೇಳಿದ ಹಂಸಲೇಖ
x
ಸಂಗೀತ ನಿರ್ದೇಶಕ ಹಂಸಲೇಖ

ಜೈನ ಧರ್ಮದ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೇಳಿದ ಹಂಸಲೇಖ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇತ್ತೀಚೆಗೆ ಜೈನ ಸಮುದಾಯದ ಬಗ್ಗೆ ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು. ಇದಕ್ಕೆ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದರು.


Click the Play button to hear this message in audio format

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇತ್ತೀಚೆಗೆ ಜೈನ ಸಮುದಾಯದ ಬಗ್ಗೆ ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು. ಇದಕ್ಕೆ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದರು. ಇದು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅನೇಕರು ಹಂಸಲೇಖ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಂತೆಯೇ ಹಂಸಲೇಖ ಅವರು ಕ್ಷಮೆ ಕೇಳಿದ್ದಾರೆ.

ಈ ವಿವಾದ ಆದ ಬೆನ್ನಲ್ಲೇ ವಿಡಿಯೊ ಮೂಲಕ ಕ್ಷಮೆ ಕೂಡ ಕೇಳಿದರು. ವಿಡಿಯೊದಲ್ಲಿ ‘’ಮಹನೀಯರೆ ದಯಮಾಡಿ ಕ್ಷಮಿಸಿ.. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂಬ ಯೋಚನೆ ಮಾಡಿದವನಲ್ಲ. ಆ ಪದವನ್ನ ಬಳಸಬೇಕು ಅಂದುಕೊಳ್ಳಲಿಲ್ಲ. ಅಲ್ಲಿ ತುಂಬಾ ಒತ್ತಡಗಳಿಂದ, ನನ್ನನ್ನ ಎಳೆದಾಡುತ್ತಿದ್ದರು. ನಾನೇನೋ ಗದರಲು ಹೋಗಿ ಆಮೇಲೆ ಈ ಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ಯಾವತ್ತೂ ಆ ರೀತಿಯ ತಪ್ಪುಗಳನ್ನ ಮಾಡೋದಿಲ್ಲ. ನಾನು ಪಂಪನ ದಾಸಾನುದಾಸ. ಕನ್ನಡವನ್ನ ಕಟ್ಟಿದ ಆ ಮಹಾನ್ ವ್ಯಕ್ತಿಯ ಸೇವೆಗೆ ನಿಂತಿರೋನು ನಾನು. ದಯಮಾಡಿ ಇದನ್ನ ಬೆಳೆಸಬೇಡಿ. ಪತ್ರದ ಮುಖಾಂತರವೂ ಕ್ಷಮೆ ಕೇಳಿದ್ದೇನೆ. ದಯವಿಟ್ಟು ಈ ವಿಷಯವನ್ನ ಇಲ್ಲಿಗೆ ಮುಕ್ತಾಯ ಮಾಡಿ’’ ಎಂದು ವಿಡಿಯೋದಲ್ಲಿ ಹಂಸಲೇಖ ಕೇಳಿಕೊಂಡಿದ್ದಾರೆ.

ವಿಡಿಯೋ ಮೂಲಕ ಕ್ಷಮೆಯಾಚನೆ

"ಪ್ರಿಯ ಮಾಧ್ಯಮಗಳೇ, ದಯಮಾಡಿ. ನಾನು ದುಡುಕಿ ಮಾತಾಡಿದ ಆ "BULLSHIT" ಪದವನ್ನು DELETE ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿಮಾಡಲು ಈ ಮೂಲಕ ಕೋರುತ್ತಿದ್ದೇನೆ. ಆಡು ಮಾತುಗಳನ್ನು COIN ಮಾಡುವ ನನ್ನಂತ ಸಿನಿಮಾ ರೈಟರ್‌ಗಳಿಗೆ ಇದು ಶಾಸ್ತಿ ಮತ್ತು ಶಾಪ ಎಂದು ನಾನು ಭಾವಿಸಿದ್ದೇನೆ" "ಆ 'ಮಾತು' ನನ್ನ ಬಾಯಿಂದ ಅಲ್ಲಿ ಹೊರಟ ಹಿನ್ನೆಲೆ ಹೀಗಿದೆ-ಆ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ. channel ನವರು Individual byte ಗಳಿಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರಬಂದೆ. ನನ್ನ ಸಹಾಯಕ, ನನ್ನನ್ನ ಹೊಗಳಿದ - 'ಸಿಟ್ಟು ತಡೆಯಲಾಗಲಿಲ್ಲ ಆದರೂ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್" - ಎಂದ. ಆಗ ನಾನು ಆತನಿಗೆ "ಸಿಟ್ಟು, ಹೋಗಿ ಬರೋ ಬುಲೆಟ್ಟು " ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು ಸಿಟ್ಟು ಒಂದು ಬುಲ್ಶಿಟ್ಟು" ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಟ್ಟು ಕ್ಷಮಿಸಿ" ಎಂದು ಬರೆದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ "ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್‌ಶಿಟ್" ಎಂದಿದ್ದರು.

ಪ್ಯಾನ್‌ ಇಂಡಿಯಾ ಸಿನಿಮಾದ ಬಗ್ಗೆಯೂ ವಿವಾದ

ಈ ಹಿಂದೆಯೂ ಹಂಸಲೇಖ ಅವರು ಪ್ಯಾನ್-ಇಂಡಿಯಾ ಚಿತ್ರರಂಗಕ್ಕೆ ಕಾಲಿಡುತ್ತಿರುವ ಕನ್ನಡ ತಾರೆಯರನ್ನು ಗುರಿಯಾಗಿಟ್ಟುಕೊಂಡು ತಮ್ಮ ತೀಕ್ಷ್ಣವಾದ ಕಾಮೆಂಟ್‌ಗಳ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ನೇರ ಮಾತುಗಳಿಗೆ ಹೆಸರುವಾಸಿಯಾದ ಹಂಸಲೇಖ ಪ್ಯಾನ್-ಇಂಡಿಯಾ ಚಲನಚಿತ್ರಗಳೊಂದಿಗೆ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿರುವ ಯಶ್, ಸುದೀಪ್ ಮತ್ತು ರಿಷಬ್ ಶೆಟ್ಟಿಯಂತಹ ನಟರನ್ನು ಹೆಸರಿಸದೆ ನಟರನ್ನು ಟೀಕಿಸಿದರು.

ಕನ್ನಡದ ಸೂಪರ್‌ಸ್ಟಾರ್‌ಗಳು ಪ್ಯಾನ್-ಇಂಡಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ತಮ್ಮ ಕನ್ನಡದ ಬೇರುಗಳಿಂದ ಹೆಚ್ಚು ಸಂಪರ್ಕ ಕಡಿತಗೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು. "ಕನ್ನಡದೊಂದಿಗೆ ಇಲ್ಲಿ ಮೂಲ ಸಂಪರ್ಕವಿತ್ತು. ಇದು ಪ್ಯಾನ್ ಇಂಡಿಯಾದಿಂದ ಕಡಿತವಾಗಿದೆ" ಎಂದು ಅವರು ವಿಮರ್ಶಾತ್ಮಕವಾಗಿ ಟೀಕಿಸಿದ್ದರು. ಪ್ಯಾನ್-ಇಂಡಿಯಾ ಚಲನಚಿತ್ರಗಳ ಮೂಲಕ ಕನ್ನಡ ಕಲಾವಿದರು ರಾಷ್ಟ್ರವ್ಯಾಪಿ ಸ್ಟಾರ್‌ಡಮ್ ಗಳಿಸಬಹುದು ಎಂಬ ಕಲ್ಪನೆಯ ಬಗ್ಗೆ ಅವರು ಸಂದೇಹ ವ್ಯಕ್ತಪಡಿಸಿದರು, ಇದನ್ನು ಭ್ರಮೆ ಎಂದು ಕರೆದರು.

Read More
Next Story