ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಸಂಚಾರಕ್ಕೆ ಅನುಮೋದನೆ
x

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಸಂಚಾರಕ್ಕೆ ಅನುಮೋದನೆ

ಚಿಕ್ಕಮಗಳೂರಿನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದರು.


ಚಿಕ್ಕಮಗಳೂರು ಮತ್ತು ತಿರುಪತಿ ನಡುವೆ ನೇರ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅಂತಿಮ ಅನುಮೋದನೆ ನೀಡಿದೆ. ಭಕ್ತಾದಿಗಳು ಮತ್ತು ಪ್ರವಾಸಿಗರಿಗೆ ಅನುಕೂಲವಾಗುವ ಈ ಹೊಸ ಸೇವೆ ಸದ್ಯಕ್ಕೆ ವಾರಕ್ಕೊಮ್ಮೆ ಸಂಚರಿಸಲಿದ್ದು, ಇದರ ವೇಳಾಪಟ್ಟಿಯನ್ನೂ ಕೂಡ ರೈಲ್ವೆ ಮಂಡಳಿ ಬಿಡುಗಡೆ ಮಾಡಿದೆ.

ತಿರುಪತಿಯಿಂದ ಚಿಕ್ಕಮಗಳೂರಿಗೆ ತೆರಳುವ ರೈಲು (ಸಂಖ್ಯೆ- 17423) ಪ್ರತಿ ಗುರುವಾರ ರಾತ್ರಿ 9 ಗಂಟೆಗೆ ಹೊರಟು, ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ. ಹಾಗೆಯೇ, ಚಿಕ್ಕಮಗಳೂರಿನಿಂದ ತಿರುಪತಿಗೆ ತೆರಳುವ ರೈಲು (ಸಂಖ್ಯೆ- 17424) ಪ್ರತಿ ಶುಕ್ರವಾರ ಸಂಜೆ 5.30ಕ್ಕೆ ಹೊರಟು, ಶನಿವಾರ ಬೆಳಿಗ್ಗೆ 7.40ಕ್ಕೆ ತಿರುಪತಿ ತಲುಪಲಿದೆ.

ಈ ರೈಲುಗಳು ಸಖರಾಯಪಟ್ಟಣ, ಬಿಸ್ಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕೆರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ, ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣ (ಬೆಂಗಳೂರು), ಕೆ.ಆರ್. ಪುರ, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರಪೇಟೆ, ಕಟ್ಪಾಡಿ, ಚಿತ್ತೂರು ಮತ್ತು ಪಾಕಲ ನಿಲ್ದಾಣಗಳಲ್ಲಿ ನಿಲುಗಡೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಸೇವೆಯ ಆರಂಭಿಕ ದಿನಾಂಕವನ್ನು ರೈಲ್ವೆ ಮಂಡಳಿ ಶೀಘ್ರದಲ್ಲೇ ಪ್ರಕಟಿಸಲಿದೆ.

ಚಿಕ್ಕಮಗಳೂರಿನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದರು. ಅವರ ಪ್ರಯತ್ನದ ಫಲವಾಗಿ ಈ ಹೊಸ ರೈಲು ಸಂಚಾರಕ್ಕೆ ಅನುಮೋದನೆ ದೊರೆತಿದ್ದು, ಶುಕ್ರವಾರ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದೆ.

Read More
Next Story