ಬೆಂಗಳೂರಿನಲ್ಲಿ ಹಾಡಹಗಲೇ ಗುಂಡಿನ ದಾಳಿ; ಬೆಚ್ಚಿಬಿದ್ದ ಉದ್ಯಾನ ನಗರಿ
x

ಬೆಂಗಳೂರಿನಲ್ಲಿ ಹಾಡಹಗಲೇ ಗುಂಡಿನ ದಾಳಿ; ಬೆಚ್ಚಿಬಿದ್ದ ಉದ್ಯಾನ ನಗರಿ


ಬೆಂಗಳೂರಿನಲ್ಲಿ ಹಾಡಹಗಲೇ ಗುಂಡಿನ ದಾಳಿಯಾಗಿದ್ದು, ಉದ್ಯಾನ ನಗರಿ ಬೆಚ್ಚಿಬಿದ್ದಿದೆ.

ಜ್ಯುವೆಲರಿ ಶಾಪ್‌ಗೆ ನುಗ್ಗಿ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ & ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ದೇವಿನಗರದ ಆರ್‌ಎಮ್ ವಿ ಅಪಾರ್ಟ್ಮೆಂಟ್ ಮುಂಭಾಗದಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ & ಜ್ಯುವೆಲರಿ ಶಾಪ್‌ ನಲ್ಲಿ ಈ ದರೋಡೆ ನಡೆದಿದೆ. ನಾಲ್ವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಅಂಗಡಿಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ.

ಫೈರಿಂಗ್ ನಲ್ಲಿ ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿದೆ. ಒಬ್ಬರಿಗೆ ಕಾಲಿಗೆ ಗುಂಡು ಬಿದ್ದಿದ್ದು, ಮತ್ತೊಬ್ಬರಿಗೆ ಹೊಟ್ಟೆಗೆ ಗುಂಡು ಬಿದ್ದಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಿನ್ನಾಭರಣ ದೋಚಲು ದುಷ್ಕರ್ಮಿಗಳು ವಿಫಲ ಯತ್ನ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, 1 ಪಿಸ್ತೂಲ್ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story